Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:23 - ಪರಿಶುದ್ದ ಬೈಬಲ್‌

23 “ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬುತ್ತಾ ಇರಲು ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿನೋಡಬೇಕೆಂಬ ಆಶೆಯು ಅವನ ಹೃದಯದಲ್ಲಿ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಕಾ ಚಾಳಿಸ್ ವರ್ಸಾ ಹೊಲ್ಯಾ ತನ್ನಾ ಇಸ್ರಾಯೆಲಾತ್ನಾ ಯೆವ್ನ್ ಹೊತ್ಯಾ ಅಪ್ಲ್ಯಾ ಭಾವಾಕ್ನಿ ಭೆಟುಚೆ ಮನುನ್ ನಿರ್ದಾರ್ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:23
18 ತಿಳಿವುಗಳ ಹೋಲಿಕೆ  

ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.


ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.


ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು