Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:26 - ಪರಿಶುದ್ದ ಬೈಬಲ್‌

26 “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದುಸ್ರ್ಯಾಂದಿಸಿ ತೆನಿ ಎಕಾಮೆಕಾಕ್ನಿ ಮಾರುನ್ ಘೆಯ್ತ್ ರಾತಾನಾ ತೊ ಮೊಯ್ಜೆ ತೆಂಚ್ಯಾ ಇದ್ರಾಕ್ ಯೆವ್ನ್ ಸಮಾಧಾನ್ ಕರುಕ್ ಸಾಟ್ನಿ ತೆಂಕಾ, ತುಮಿ ಭಾವ್ ಭಾವಾ ಹೊವ್ನ್ ಬಿ ಕಶ್ಯಾಕ್ ಎಕಾಮೆಕಾಕ್ ದುಕ್ವುನ್ ಘೆತ್ಯಾಶಿ? ಮನುನ್ ಇಚಾರುಕ್ ಗೆಲೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:26
12 ತಿಳಿವುಗಳ ಹೋಲಿಕೆ  

ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?


ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.


ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.


ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು