Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:48 - ಪರಿಶುದ್ದ ಬೈಬಲ್‌

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:48
17 ತಿಳಿವುಗಳ ಹೋಲಿಕೆ  

“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.


ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಯೆಹೋವನೇ, ನೀನಾದರೋ ಸದಾಕಾಲ ಸನ್ಮಾನ ಹೊಂದುವೆ.


ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು