Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:59 - ಪರಿಶುದ್ದ ಬೈಬಲ್‌

59 ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಸ್ತೆಪನಾಕ್ ಗುಂಡೆ ಟಾಕ್ಲ್ಯಾನಿ ಖರೆ ಸ್ತೆಪನಾನ್ ಮಾಗ್ನಿ ಕರುನ್ಗೆತ್, “ಧನಿಯಾ ಜೆಜು, ಮಾಜೊ ಆತ್ಮೊ ತುಜ್ಯಾಕ್ಡೆ ಘೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:59
12 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.


ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು