Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:17 - ಪರಿಶುದ್ದ ಬೈಬಲ್‌

17 ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪೆದ್ರುನ್ ಅನಿ ಜುವಾಂವಾಕ್ ತೆಂಚ್ಯಾರ್ ಅಪ್ಲಿ ಹಾತಾ ಥವ್ಲ್ಯಾನಿ ತನ್ನಾ ತೆಂಕಾ ಪವಿತ್ರ್ ಆತ್ಮೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:17
15 ತಿಳಿವುಗಳ ಹೋಲಿಕೆ  

ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.


ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು