Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:26 - ಪರಿಶುದ್ದ ಬೈಬಲ್‌

26 ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಧನಿಯಾಚ್ಯಾ ದೆವ್ ದುತಾನ್ ಫಿಲಿಪಾಕ್, ತಿಯಾ ಉಟುನ್ ತಯಾರ್ ಹೊವ್ನ್ ದಕ್ಷಿನಾಚ್ಯಾ ಭಾಜುಕ್ ಮಟ್ಲ್ಯಾರ್, ಜೆರುಜಲೆಮಾಕ್ನಾ ಗಾಜ್ಯಾಕ್ ಜಾತಲ್ಯಾ ಡಂಗ್ಳಿಚ್ಯಾ ವಾಟೆಕ್ಡೆ ಜಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:26
18 ತಿಳಿವುಗಳ ಹೋಲಿಕೆ  

ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.


“ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.


ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.


ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು.


ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು