Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:33 - ಪರಿಶುದ್ದ ಬೈಬಲ್‌

33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ಮಾನುನ್ ಘೆಟಲ್ಯಾ ಸಾಟ್ನಿ ತೆಕಾ ನ್ಯಾಯ್ ಗಾವ್ಕನಾ ತೆಚ್ಯಾ ಪುರ್ವಜಾಂಚ್ಯಾ ವಿಶಯಾತ್ ಸಾಂಗುಕ್ ಕೊನಾಕ್ಬಿ ಬಳ್ ನಾ ಕಶ್ಯಾಕ್ ಮಟ್ಲ್ಯಾರ್, ಜಿಮ್ನಿ ವೈನಾ ತೆಜೊ ಜಿವನ್ ಸರುನ್ಗೆತ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:33
17 ತಿಳಿವುಗಳ ಹೋಲಿಕೆ  

ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ.


“ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.


ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.


ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು