Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:7 - ಪರಿಶುದ್ದ ಬೈಬಲ್‌

7 ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಥೈತ್ಲ್ಯಾ ಲೈ ಲೊಕಾಕ್ನಿ ಧರಲೊ ಮಾರು ತೆಂಕಾ ಸೊಡುನ್ ಜಾತಾನಾ ಮೊಟ್ಯಾನ್ ಅವಾಜ್ ಕರುಂಗೆತ್ ಗೆಲೊ ಅನಿ ಲೈ ಸೊಟ್ಯಾಕ್ನಿ ಅನಿ ವಾರೆ ಮಾರಲ್ಯಾಕ್ನಿ ಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:7
16 ತಿಳಿವುಗಳ ಹೋಲಿಕೆ  

ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.


ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.


ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.


ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.


ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು