Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:26 - ಪರಿಶುದ್ದ ಬೈಬಲ್‌

26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸಾವ್ಲ್ ಜೆರುಜಲೆಮಾಕ್ ಗೆಲೊ, ತೆನೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಚೆ ಮನುನ್ ಕಟ್ಪಟ್ಲ್ಯಾನ್, ಖರೆ ತೆನಿ ಸಗ್ಳ್ಯಾನಿ ತೆಕಾ ಭಿಂವ್ಲ್ಯಾನಿ, ಸಾವ್ಲ್ ಖರೆಚ್ ಜೆಜುಚೊ ಶಿಸಾ ಮನ್ತಲೆ ತೆನಿ ವಿಶ್ವಾಸ್ ಕರುಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:26
9 ತಿಳಿವುಗಳ ಹೋಲಿಕೆ  

ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.


ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.


ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.


ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು