Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:32 - ಪರಿಶುದ್ದ ಬೈಬಲ್‌

32 ಜೆರುಸಲೇಮಿನ ಸುತ್ತಮುತ್ತಲ್ಲಿದ್ದ ಊರುಗಳಲ್ಲೆಲ್ಲಾ ಪೇತ್ರನು ಪ್ರಯಾಣ ಮಾಡುತ್ತಿರುವಾಗ ಲುದ್ದ ಎಂಬ ಊರಲ್ಲಿ ವಾಸವಾಗಿರುವ ವಿಶ್ವಾಸಿಗಳನ್ನು ಭೇಟಿಯಾಗಲು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಪೆದ್ರು ಜೆರುಜಲೆಮಾಚ್ಯಾ ಅಜು ಬಾಜು ಹೊತ್ತ್ಯಾ ಗಾಂವಾತ್ನಿ ಜಾಂವ್ನ್ಗೆತ್ ರಾತಾನಾ ಲಿಡ್ಡಾ ಮನ್ತಲ್ಯಾ ಗಾಂವಾತ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಭೆಟುಚೆ ಮನುನ್ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:32
18 ತಿಳಿವುಗಳ ಹೋಲಿಕೆ  

ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.


ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.


ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.


ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.


ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.


ಲೋದ್, ಹಾದೀದ್, ಓನೋ ಊರುಗಳವರು 725


ಲೋದ್, ಹಾದೀದ್ ಮತ್ತು ಓನೋ ಪಟ್ಟಣದವರು 721


ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು.


ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು