Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:43 - ಪರಿಶುದ್ದ ಬೈಬಲ್‌

43 ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಪೆದ್ರು ಲೈ ದಿಸಾಂಚ್ಯಾ ಪತರ್ ಬಿ ಜೊಪ್ಪಾತ್ಲ್ಯಾ ಚಮ್ಡ್ಯಾಚೆ ಕಾಮ್ ಕರ್‍ತಲ್ಯಾ ಸಿಮಾವಾಚ್ಯಾ ಘರಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:43
12 ತಿಳಿವುಗಳ ಹೋಲಿಕೆ  

ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು.


ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.


ಮೇಯರ್ಕೋನ್ ಮತ್ತು ರಕ್ಕೋನ್, ಯೊಪ್ಪಕ್ಕೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ‘ಪೇತ್ರ’ ಎಂತಲೂ ಕರೆಯುತ್ತಾರೆ.


ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.


ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.


“ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು