Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:6 - ಪರಿಶುದ್ದ ಬೈಬಲ್‌

6 ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಖರೆ ತಿಯಾ ಅತ್ತಾ ಉಟುನ್ ಶಾರಾತ್ ಜಾ, ತಿಯಾ ಕಾಯ್ ಕರುಚೆ ಮನ್ತಲೆ ಥೈತ್ಲೊ ಎಕ್ ಮಾನುಸ್ ತುಕಾ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:6
33 ತಿಳಿವುಗಳ ಹೋಲಿಕೆ  

“ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.


ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು.


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಆದ್ದರಿಂದ ಜನರು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.


ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.


ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.


ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು