Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:1 - ಪರಿಶುದ್ದ ಬೈಬಲ್‌

1 ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:1
15 ತಿಳಿವುಗಳ ಹೋಲಿಕೆ  

ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು.


ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರೇಲರಿಗೆ ಕೊಟ್ಟ ಆಜ್ಞೆಗಳು ಇವೇ.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:


ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.


ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಜನರು ರೆಫೀದೀಮನ್ನು ಬಿಟ್ಟು ಸೀನಾಯ್ ಮರುಭೂಮಿಗೆ ಬಂದಿದ್ದರು. ಅಲ್ಲಿ ಅವರು ಬೆಟ್ಟದ ಬಳಿ ತಂಗಿದರು.


ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.


ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು