Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:16 - ಪರಿಶುದ್ದ ಬೈಬಲ್‌

16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:16
20 ತಿಳಿವುಗಳ ಹೋಲಿಕೆ  

ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ


ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.


ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು.


ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.


“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”


ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು.


ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.


ಮೋಶೆಯು ಇಸ್ರೇಲರ ಕುಲಪ್ರಧಾನರಿಗೆ ಹೇಳಿದ್ದೇನೆಂದರೆ: ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು