Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:14 - ಪರಿಶುದ್ದ ಬೈಬಲ್‌

14 ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:14
10 ತಿಳಿವುಗಳ ಹೋಲಿಕೆ  

ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್;


ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: ಪ್ರತಿಯೊಬ್ಬ ಪ್ರಧಾನನು ಮೂರುಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಗಂಡು ಕುರಿಮರಿಯನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಒಂದು ವರ್ಷದ ಐದು ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಯಜ್ಞವಾಗಿ ಸಮರ್ಪಿಸಲ್ಪಟ್ಟವು. ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು. ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು. ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು. ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು. ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು. ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು. ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು. ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ತನ್ನ ಕಾಣಿಕೆಗಳನ್ನು ತಂದನು. ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನಿಯ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು. ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು. ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು. ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು.


“ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.


“ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.


ಚೂವಾರನ ಮಗನಾದ ನೆತನೇಲನು ಇಸ್ಸಾಕಾರನ ಕುಲದ ಸೇನಾಧಿಪತಿ.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು