Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:30 - ಪರಿಶುದ್ದ ಬೈಬಲ್‌

30 ಆದರೆ ಹೋಬಾಬನು, “ಇಲ್ಲ. ನಾನು ನಿಮ್ಮೊಂದಿಗೆ ಬರುವುದಿಲ್ಲ. ನಾನು ನನ್ನ ದೇಶಕ್ಕೂ ನನ್ನ ಜನರ ಬಳಿಗೂ ಹೋಗುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಅವನು - ನಾನು ಬರುವದಿಲ್ಲ; ನನ್ನ ಸ್ವದೇಶಕ್ಕೆ, ಸ್ವಜನರ ಬಳಿಗೆ ಹೋಗುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:30
12 ತಿಳಿವುಗಳ ಹೋಲಿಕೆ  

ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


“ಅದಕ್ಕೆ ಮಗನು, ‘ನಾನು ಹೋಗುವುದಿಲ್ಲ’ ಎಂದನು. ಆದರೆ ಆ ಬಳಿಕ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಕೆಲಸಕ್ಕೆ ಹೋದನು.


ರಾಣಿಯೇ, ನನಗೆ ಕಿವಿಗೊಡು. ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ. ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.


ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.


“ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.


ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು.


ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು