Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:17 - ಪರಿಶುದ್ದ ಬೈಬಲ್‌

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:17
32 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.


ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.


ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.


ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.


ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.


ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.


ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.


ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,


ಈ ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಈ ಕೆಲಸವನ್ನು ಮಾಡಲಾಗದು.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು