Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:20 - ಪರಿಶುದ್ದ ಬೈಬಲ್‌

20 ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:20
21 ತಿಳಿವುಗಳ ಹೋಲಿಕೆ  

ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು; ಹಸಿವೆಗೊಂಡಿರುವವನಿಗೋ ಕಹಿಯೂ ಸಿಹಿ.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.


ಸಾಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,


ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?


ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


ಬಳಿಕ ಜನರು, “ನಾವು ಇನ್ನೊಬ್ಬ ನಾಯಕನನ್ನು ಆರಿಸಿಕೊಂಡು ಈಜಿಪ್ಟಿಗೆ ಮರಳಿಹೋಗೋಣ” ಎಂದು ಮಾತಾಡಿಕೊಂಡರು.


ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?


ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು