Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:8 - ಪರಿಶುದ್ದ ಬೈಬಲ್‌

8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:8
9 ತಿಳಿವುಗಳ ಹೋಲಿಕೆ  

ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.


ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.


ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.


ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು.


ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು