Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:8 - ಪರಿಶುದ್ದ ಬೈಬಲ್‌

8 ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:8
39 ತಿಳಿವುಗಳ ಹೋಲಿಕೆ  

ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರಕೊಟ್ಟನು.


ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


“ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.


“ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?


ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?


ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.


“ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.


“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.


ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.


ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.


ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.


ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು