Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:20 - ಪರಿಶುದ್ದ ಬೈಬಲ್‌

20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:20
19 ತಿಳಿವುಗಳ ಹೋಲಿಕೆ  

ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.


ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.


ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದ್ದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿವೆಯೋ ಅಥವಾ ಇಲ್ಲವೋ,


ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು.


“ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು