Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:1 - ಪರಿಶುದ್ದ ಬೈಬಲ್‌

1 ಆ ರಾತ್ರಿಯಲ್ಲಿ ಜನರೆಲ್ಲರೂ ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದನ್ನು ಕೇಳಿ ಜನಸಮೂಹದವರೆಲ್ಲರೂ ಗುಲ್ಲುಮಾಡಿ ಬಹಳ ಕೂಗಿಕೊಂಡರು; ಆ ರಾತ್ರಿಯೆಲ್ಲಾ ಜನರು ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:1
13 ತಿಳಿವುಗಳ ಹೋಲಿಕೆ  

ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.


ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.


ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.


ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.


“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.


ದಾವೀದ ಮತ್ತು ಅವನ ಸೈನ್ಯದ ಇತರರು ಶಕ್ತಿಮೀರಿ ಜೋರಾಗಿ ಅತ್ತರು.


ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು.


ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,


ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.


ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ.


ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು