Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:10 - ಪರಿಶುದ್ದ ಬೈಬಲ್‌

10 ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:10
14 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು.


ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.


ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.


ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.


ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.


ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು