Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:19 - ಪರಿಶುದ್ದ ಬೈಬಲ್‌

19 ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:19
23 ತಿಳಿವುಗಳ ಹೋಲಿಕೆ  

ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.


ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”


ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು