Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:22 - ಪರಿಶುದ್ದ ಬೈಬಲ್‌

22 ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:22
31 ತಿಳಿವುಗಳ ಹೋಲಿಕೆ  

ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!


ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.


ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.


ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.


ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.


ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಆಶಾತುರರಾಗಿ ಆತನನ್ನು ಪರೀಕ್ಷಿಸಿದರು.


“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?


ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು.


ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.


“ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.


ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.


ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.


ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.


ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು