Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:31 - ಪರಿಶುದ್ದ ಬೈಬಲ್‌

31 ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:31
14 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.


ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.


ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.


ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು; ಕರ್ಮೀಯ ಕುಟುಂಬದವರಾದ ಕರ್ಮೀಯರು.


ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’”


“ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.


ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು