Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:40 - ಪರಿಶುದ್ದ ಬೈಬಲ್‌

40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಮರುದಿನ ಬೆಳಿಗ್ಗೆ ಜನರು ಎದ್ದು - ನಾವು ಪಾಪಮಾಡಿರುವದು ನಿಜ; ಯೆಹೋವನು ವಾಗ್ದಾನಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:40
8 ತಿಳಿವುಗಳ ಹೋಲಿಕೆ  

“ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ “ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


“ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು