Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:5 - ಪರಿಶುದ್ದ ಬೈಬಲ್‌

5 ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:5
18 ತಿಳಿವುಗಳ ಹೋಲಿಕೆ  

ಮೋಶೆ ಇದನ್ನು ಕೇಳಿ ನೆಲದವರೆಗೆ ಬಾಗಿ


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲುಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ?


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.


ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು