Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:9 - ಪರಿಶುದ್ದ ಬೈಬಲ್‌

9 ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:9
50 ತಿಳಿವುಗಳ ಹೋಲಿಕೆ  

ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


“ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’”


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.


ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


“ಆಗ ನಾನು, ‘ನೀವು ಕಳವಳಗೊಳ್ಳಬೇಡಿರಿ! ಆ ಜನರಿಗೆ ಭಯಪಡಬೇಡಿರಿ!


ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.


ಅಲ್ಲಿ ನೀರಿಲ್ಲದಿದ್ದ ಕಾರಣ ಅವರು ಮೋಶೆ ಆರೋನರ ವಿರುದ್ಧವಾಗಿ ಸೇರಿಬಂದರು.


ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.


ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.


ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು