Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:3 - ಪರಿಶುದ್ದ ಬೈಬಲ್‌

3 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:3
27 ತಿಳಿವುಗಳ ಹೋಲಿಕೆ  

ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು.


ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.


ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


ರಕ್ಷಣಾಮಾರ್ಗದಲ್ಲಿರುವವರ ಮತ್ತು ನಾಶನಮಾರ್ಗದಲ್ಲಿರುವವರ ಮಧ್ಯದಲ್ಲಿ ನಾವು ಕ್ರಿಸ್ತನ ಪರಿಮಳವಾಗಿದ್ದೇವೆ. ದೇವರಿಗೆ ಇದೇ ನಮ್ಮ ಕಾಣಿಕೆ.


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.


ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು