ಅರಣ್ಯಕಾಂಡ 15:30 - ಪರಿಶುದ್ದ ಬೈಬಲ್30 “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.