Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:8 - ಪರಿಶುದ್ದ ಬೈಬಲ್‌

8 “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸರ್ವಾಂಗಹೋಮ, ಹರಕೆ ಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:8
10 ತಿಳಿವುಗಳ ಹೋಲಿಕೆ  

“ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


“ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.


“ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.


ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ


ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು