Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:18 - ಪರಿಶುದ್ದ ಬೈಬಲ್‌

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:18
7 ತಿಳಿವುಗಳ ಹೋಲಿಕೆ  

ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.


ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.


ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.


“ಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.


ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು