Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:37 - ಪರಿಶುದ್ದ ಬೈಬಲ್‌

37 “ಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:37
5 ತಿಳಿವುಗಳ ಹೋಲಿಕೆ  

ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.


ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು


“ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ.


ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು