Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:39 - ಪರಿಶುದ್ದ ಬೈಬಲ್‌

39 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:39
5 ತಿಳಿವುಗಳ ಹೋಲಿಕೆ  

ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.


ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.


ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು