Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:42 - ಪರಿಶುದ್ದ ಬೈಬಲ್‌

42 ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಸಮೂಹದವರೆಲ್ಲರೂ ಹೀಗೆ ಮೋಶೆ ಆರೋನರಿಗೆ ವಿರೋಧವಾಗಿ ಕೂಡಿದ್ದಾಗ ದೇವದರ್ಶನದ ಗುಡಾರದ ಕಡೆಗೆ ನೋಡಲಾಗಿ ಆಹಾ, ಮೇಘವು ಅದನ್ನು ಮುಚ್ಚಿಕೊಂಡಿತು, ಮತ್ತು ಯೆಹೋವನ ತೇಜಸ್ಸು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:42
10 ತಿಳಿವುಗಳ ಹೋಲಿಕೆ  

ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.


ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.


ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,


ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.


ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.


ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.


ಆಗ ಮೋಶೆ ಆರೋನರು ದೇವದರ್ಶನಗುಡಾರದ ಮುಂದಕ್ಕೆ ಬಂದರು.


ಅಲ್ಲಿ ನೀರಿಲ್ಲದಿದ್ದ ಕಾರಣ ಅವರು ಮೋಶೆ ಆರೋನರ ವಿರುದ್ಧವಾಗಿ ಸೇರಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು