Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:10 - ಪರಿಶುದ್ದ ಬೈಬಲ್‌

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:10
23 ತಿಳಿವುಗಳ ಹೋಲಿಕೆ  

ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.


ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.


(ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)


ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು.


ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.


ಆದ್ದರಿಂದ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.


ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು