Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:2 - ಪರಿಶುದ್ದ ಬೈಬಲ್‌

2 “ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರ ಸಂಗಡ ನೀನು ಮಾತಾಡಿ ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೋ. ಅವನವನ ಕೋಲಿನ ಮೇಲೆ ಆಯಾ ಅಧಿಪತಿಯ ಹೆಸರನ್ನು ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:2
18 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.


ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.


ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.


ದೇವದರ್ಶನಗುಡಾರವನ್ನು ಮತ್ತು ಒಡಂಬಡಿಕೆಯ ಪೆಟ್ಟಿಗೆಯನ್ನು ಅಭಿಷೇಕಿಸಲು ಈ ತೈಲವನ್ನು ಉಪಯೋಗಿಸು.


ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.


ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು