Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:5 - ಪರಿಶುದ್ದ ಬೈಬಲ್‌

5 ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಯಾರನ್ನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲ್ಯರು ನಿವ್ಮಿುಬ್ಬರಿಗೆ ವಿರೋಧವಾಗಿ ಮಾಡುವ ಗುಣುಗುಟ್ಟುವಿಕೆಯು ನನಗೆ ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:5
21 ತಿಳಿವುಗಳ ಹೋಲಿಕೆ  

ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.


ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ನೀನು ಮತ್ತು ನಿನ್ನ ಹಿಂಬಾಲಕರು ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.


ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’”


ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.


ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.


ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು