Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:22 - ಪರಿಶುದ್ದ ಬೈಬಲ್‌

22 ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:22
7 ತಿಳಿವುಗಳ ಹೋಲಿಕೆ  

“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.


“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


“ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು