Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:8 - ಪರಿಶುದ್ದ ಬೈಬಲ್‌

8 ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:8
32 ತಿಳಿವುಗಳ ಹೋಲಿಕೆ  

“ಆರೋನನ ಮತ್ತು ಅವನ ಪುತ್ರರು ಧಾನ್ಯನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಆ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”


ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.


ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


“ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕ ಉದ್ಯೋಗಕ್ಕೆ ಆರಿಸಲ್ಪಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.


ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.


“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.


“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.


“ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.


“ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”


“ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.


ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.


ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು