Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:9 - ಪರಿಶುದ್ದ ಬೈಬಲ್‌

9 ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:9
24 ತಿಳಿವುಗಳ ಹೋಲಿಕೆ  

ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.


ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.


“ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ.


“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.


ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


“ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


“ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.


ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.


ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.


ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.


“ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.


ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.


“ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು