Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:14 - ಪರಿಶುದ್ದ ಬೈಬಲ್‌

14 “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಮೈಲಿಗೆ ನಿಯಮವಿದು: ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯೊಳಗಿರುವವರೆಲ್ಲರು ಹಾಗು ಅದರೊಳಗೆ ಬರುವವರು ಕೂಡ ಮೈಲಿಗೆಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 [ಹೊಲೆಗಳೆವ] ಕಟ್ಟಳೆ ಹೇಗಂದರೆ - ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯಲ್ಲಿರುವವರೆಲ್ಲರೂ ಅದರೊಳಗೆ ಬರುವವರೂ ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:14
13 ತಿಳಿವುಗಳ ಹೋಲಿಕೆ  

ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.


ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.


ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.


ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯಲಾಗದ ದದ್ದು,


ಸ್ರಾವವುಳ್ಳ ಜನರು ಅನುಸರಿಸಬೇಕಾದ ನಿಯಮಗಳು ಇವುಗಳೇ. ವೀರ್ಯಸ್ಖಲನದಿಂದ ಅಶುದ್ಧರಾದ ಪುರುಷರು ಅನುಸರಿಸಬೇಕಾದ ನಿಯಮಗಳು ಇವುಗಳೇ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


“ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಯಾವ ಶವದ ಬಳಿಗೆ ಹೋಗಕೂಡದು.


ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ ಮಾಡಿಸಿಕೊಳ್ಳಬೇಕು.


ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”


ಇವರನ್ನೆಲ್ಲಾ ಸಮಾಧಿ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧಪಡಿಸಲು ಅವರು ಹಾಗೆ ಮಾಡಲೇಬೇಕು.


ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು