Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:9 - ಪರಿಶುದ್ದ ಬೈಬಲ್‌

9 “ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ಯರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನ ಮಾಡಬೇಕು. ಅದು ಹೊಲೆಗಳೆವ ನೀರನ್ನು ಸಿದ್ಧಪಡಿಸುವದಕ್ಕಾಗಿ ಅಲ್ಲೇ ಇಟ್ಟಿರಬೇಕು; ಅದು ದೋಷಪರಿಹಾರಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:9
16 ತಿಳಿವುಗಳ ಹೋಲಿಕೆ  

ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.


ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.


ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.


ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.


ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು