Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:34 - ಪರಿಶುದ್ದ ಬೈಬಲ್‌

34 ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:34
15 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ಈ ರೀತಿಯಾಗಿ ಇಸ್ರೇಲರು ತಮ್ಮ ಗುಂಪುಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡಿದರು.


“ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.


ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು.


ಇಸ್ರೇಲರ ಆಯಾ ಸೈನ್ಯಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.


ಯೆಹೋವನ ಆಜ್ಞೆಯ ಪ್ರಕಾರ ಮೋಶೆಯು ಲೇವಿಯರನ್ನು ಇತರ ಇಸ್ರೇಲರೊಂದಿಗೆ ಲೆಕ್ಕಿಸಲಿಲ್ಲ.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ.


ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.


ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು