Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:1 - ಪರಿಶುದ್ದ ಬೈಬಲ್‌

1 ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:1
23 ತಿಳಿವುಗಳ ಹೋಲಿಕೆ  

ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.


ಎಚ್ಯೋನ್‌ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.


ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.


ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.


ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳವರೆಗೆ ಪಾಳೆಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ತನಕ ಇಸ್ರೇಲರು ಪ್ರಯಾಣ ಮಾಡಲಿಲ್ಲ.


ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.


ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.


ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ಇಸ್ರೇಲರೆಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು.


ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.


ಇಸ್ರೇಲರು ಈಜಿಪ್ಟನ್ನು ಬಿಟ್ಟುಬಂದ ಮೇಲೆ ಅರಣ್ಯ ಮಾರ್ಗವಾಗಿ ಕೆಂಪುಸಮುದ್ರಕ್ಕೆ ಹೋದರು. ತರುವಾಯ ಅವರು ಕಾದೇಶಿಗೆ ಹೋದರು.


ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.


ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.


“ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು