Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:15 - ಪರಿಶುದ್ದ ಬೈಬಲ್‌

15 ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:15
16 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.


ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.


ಇದಲ್ಲದೆ ಅವರು ತಮ್ಮ ದನಕರುಗಳನ್ನೂ ಕಾನಾನ್ ದೇಶದಲ್ಲಿ ತಾವು ಹೊಂದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಹೋದರು. ಹೀಗೆ ಇಸ್ರೇಲನು ತನ್ನ ಎಲ್ಲಾ ಮಕ್ಕಳೊಂದಿಗೆ ಮತ್ತು ತನ್ನ ಕುಟುಂಬದೊಂದಿಗೆ ಈಜಿಪ್ಟಿಗೆ ಹೋದನು.


ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.


ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.


ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?


ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.


ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.


ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


ಅವನ ಜೊತೆಯಲ್ಲಿ ಅವನ ಗಂಡುಮಕ್ಕಳು, ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಇದ್ದರು. ಅವನ ಸಂಸಾರದವರೆಲ್ಲ ಅವನ ಜೊತೆ ಈಜಿಪ್ಟಿಗೆ ಹೋದರು.


ಏಳನೆಯ ದಿನ ಆ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು