Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:16 - ಪರಿಶುದ್ದ ಬೈಬಲ್‌

16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:16
14 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


“ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.


ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.


ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.


ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.


“ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿಮ್ಮ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.


ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು