Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:18 - ಪರಿಶುದ್ದ ಬೈಬಲ್‌

18 ಆದರೆ ಎದೋಮಿನ ಅರಸನು, “ನಮ್ಮ ದೇಶವನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ, ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಎದೋಮ್ಯರು, “ನಮ್ಮ ನಾಡನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ ನಿಮ್ಮ ಮೇಲೆ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಎದೋಮ್ಯರು - ನಮ್ಮ ದೇಶವನ್ನು ನೀವು ದಾಟಿ ಹೋಗಕೂಡದು; ದಾಟುವದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:18
6 ತಿಳಿವುಗಳ ಹೋಲಿಕೆ  

ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.


ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.


ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.


ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.


ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.


ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು