Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:20 - ಪರಿಶುದ್ದ ಬೈಬಲ್‌

20 ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಎದೋಮ್ಯರು - ನೀವು ದಾಟಿಲೇಬಾರದು ಎಂದು ಉತ್ತರ ಕೊಟ್ಟು ಬಹುಜನ ಕೂಡಿಕೊಂಡು ಬಲಾತ್ಕಾರದಿಂದ ಎದುರಿಸುವವರಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:20
10 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.


ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.


ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.


ಆದರೆ ಎದೋಮಿನ ಅರಸನು, “ನಮ್ಮ ದೇಶವನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ, ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟನು.


ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ಇಸ್ರೇಲರು ಅವನ ದೇಶವನ್ನು ಹಾದು ಹೋಗಲು ಎದೋಮ್ಯರ ಅರಸನು ಬಿಡಲಿಲ್ಲ. ಆಗ ಇಸ್ರೇಲರು ಬೇರೊಂದು ದಿಕ್ಕಿನಲ್ಲಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು